Yuvraj Singh ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
Yuvraj Singh ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

8/23/2020

ದುಬೈನಲ್ಲಿ RCB ತಂಡ ಸೇರಿಕೊಂಡ ABD ಸೇರಿದಂತೆ ಸೌತ್ ಆಫ್ರಿಕಾ ಕ್ರಿಕೆಟರ್ಸ್!

  IPL ಟೂರ್ನಿ ರಂಗು ಕಳೆಗಟ್ಟಿದೆ. ಭಾರತದಲ್ಲಿ 13ನೇ ಆವೃತ್ತಿ IPL ಟೂರ್ನಿ ನಡೆಯದಿದ್ದರೂ ಭಾರತೀಯರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಕೊರೋನಾ ವೈರಸ್ ಕಾರಣ ಸೆಪ್ಟೆಂಬರ್ 19 ರಿಂದ ದುಬೈನಲ್ಲಿ ಆರಂಭವಾಗುತ್ತಿರುವ ಐಪಿಎಲ್ ಟೂರ್ನಿಗಾಗಿ ಇದೀಗ 8 ತಂಡಗಳು ದುಬೈಗೆ ತೆರಳಿದೆ. RCB ಕೂಡ ದುಬೈನ ಹೋಟೆಲ್ ಒಂದರಲ್ಲಿ ಕ್ವಾರಂಟೈನ್ ಆಗಿದೆ. ಇದೀಗ ದುಬೈನಲ್ಲಿರುವ RCB ತಂಡದ ಜೊತೆಗೆ ಫೇವರಿಟ್ ಕ್ರಿಕೆಟಿಗರಾದ ಎಬಿ ಡಿವಿಲಿಯರ್ಸ್ ಹಾಗೂ ,ಡೇಲ್ ಸ್ಟೇನ್ ಹಾಗೂ ಕ್ರಿಸ್ ಮಾರಿಸ್ ಸೇರಿಕೊಂಡಿದ್ದಾರೆ.


ಶುಕ್ರವಾರ(ಆ.21) ನಾಯಕ ವಿರಾಟ್ ಕೊಹ್ಲಿ ದುಬೈ ತಲುಪಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇದೀಗ ಸೌತ್ ಆಫ್ರಿಕಾದಿಂದ ಆಗಮಿಸಿದ ಎಬಿ ಡಿವಿಲಿಯರ್ಸ್, ಡೇಲ್ ಸ್ಟೇನ್ ಹಾಗೂ ಕ್ರಿಸ್ ಮಾರಿಸ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. 7 ದಿನಗಳ ಕಾಲ ಐಪಿಎಲ್ ತಂಡದ ಕ್ರಿಕೆಟಿಗರು ಕ್ವಾರಂಟೈನ್‌ಗೆ ಒಳಪಡಲಿದ್ದಾರೆ.

ಹೊಸ ಮಾರ್ಗಸೂಚಿ, ನಿಯಮ ಹಾಗೂ ಮುಂಜಾಗ್ರತೆಗಳಿಂದ ಹಿಂದಿನ ಐಪಿಎಲ್ ಟೂರ್ನಿಗಳಲ್ಲಿ ಪ್ರಯಾಣ ಮಾಡಿದಂತೆ ಸಾಧ್ಯವಿಲ್ಲ. ಕೊರೋನಾ ವೈರಸ್ ಕಾರಣ ಎಚ್ಚರ ವಹಿಸಬೇಕಿದೆ. ಸದ್ಯ ಐಪಿಲ್ ಟೂರ್ನಿಗಾಗಿ ದುಬೈಗೆ ಆಗಮಿಸಿರುವುದು ಸಂತಸ ತಂದಿದೆ. ಉತ್ತಮ ಟೂರ್ನಿಯನ್ನು ಎದುರನೋಡುತ್ತಿದ್ದೇನೆ. ಜೊತೆಗೆ ತಂಡ ಸೇರಿಕೊಂಡಿರುವ ಹೊಸ ಮುಖಗಳನ್ನು ನೋಡಲು, ಅವರ ಜೊತೆ ಒಟ್ಟಾಗಿ ಆಡಲು ಉತ್ಸುಕನಾಗಿದ್ದೇನೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.

ತಂಡದ ವೇಗಿ ಡೇಲ್ ಸ್ಟೇನ್ ಕೂಡ ಮತ್ತೆ ಆರ್‌ಸಿಬಿ ಸೇರಿಕೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ತೀವ್ರ ಉಷ್ಣತೆ ಇದೆ. ಈ ಬಿಸಿ ವಾತಾವರಣದಲ್ಲಿ ಪ್ರದರ್ಶನ ಸವಾಲಿನ ಕೆಲಸ ಎಂದಿದ್ದಾರೆ.

ಭಾರತದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಬಿಸಿಸಿಐ, ಐಪಿಎಲ್ ಟೂರ್ನಿಯನ್ನು ದುಬೈಗೆ ಸ್ಥಳಾಂತರ ಮಾಡಿದೆ. ಸೆಪ್ಟೆಂಬರ್ 19 ರಿಂದ ಟೂರ್ನಿ ಆರಂಭಗೊಳ್ಳಲಿದೆ. ನವೆಂಬರ್ 10 ರಂದು ಫೈನಲ್ ಪಂದ್ಯ ನಡೆಯಲಿದೆ. 

ಹಾಲಿ ಟೀಂ ಇಂಡಿಯಾ VS ಮಾಜಿ ಕ್ರಿಕೆಟರ್ಸ್ ಚಾರಿಟಿ ಪಂದ್ಯ: ದಿಗ್ಗಜರ ತಂಡ ಪ್ರಕಟಿಸಿದ ಇರ್ಫಾನ್!

 ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ಎಂ.ಎಸ್.ಧೋನಿ ನೇತೃತ್ವದ ಮಾಜಿ ಕ್ರಿಕೆಟಿಗರ ತಂಡ ನಡುವಿನ ಪಂದ್ಯ ಇತರ ಎಲ್ಲಾ ಕ್ರಿಕೆಟ್ ಹೋರಾಟಕ್ಕಿಂತ ಕುತೂಹಲ ಕೆರಳಿಸಲಿದೆ. ಇಂತಹ ಒಂದು ಹೊಸ ಪ್ರಸ್ತಾವನೆಯನ್ನು ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಮುಂದಿಟ್ಟಿದ್ದಾರೆ. ಎಂ.ಎಸ್.ಧೋನಿಗೆ ಸರಿಯಾಗಿ ವಿದಾಯದ ಪಂದ್ಯ ಸಿಕ್ಕಿಲ್ಲ. ಹೀಗಾಗಿ ಧೋನಿಗೆ ವಿದಾಯದ ಪಂದ್ಯ ಆಯೋಜಿಸಬೇಕು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ಪಠಾಣ್ ಹೊಸ ಪ್ರಸ್ತಾವನೆ ಇಡೋ ಮೂಲಕ ಎಲ್ಲರ ಗಮನಸೆಳೆದಿದ್ದಾರೆ.


ಧೋನಿಯಂತೆ ಟೀಂ ಇಂಡಿಯಾದ ಹಲವು ದಿಗ್ಗಜ ಕ್ರಿಕೆಟಿಗರು ವಿದಾಯದ ಪಂದ್ಯ ಆಡದೇ ನಿವೃತ್ತಿ ಘೋಷಿಸಿದ್ದಾರೆ. ಈ ರೀತಿ ಸರಿಯಾದ ವಿದಾಯದ ಪಂದ್ಯ ಸಿಗದ ಮಾಜಿ ಕ್ರಿಕೆಟಿಗರು ಹಾಗೂ ಹಾಲಿ ಟೀಂ ಇಂಡಿಯಾ ನಡುವೆ ಚಾರಿಟಿ ಪಂದ್ಯಕ್ಕೆ ಪ್ರಸ್ತಾವನೆ ಇಟ್ಟಿದ್ದಾರೆ. ವಿಶೇಷ ಅಂದರೆ ಇರ್ಫಾನ್ ಪಠಾಣ್ ಮಾಜಿ ಟೀಂ ಇಂಡಿಯಾ XI ತಂಡವನ್ನು ಪ್ರಕಟಿಸಿದ್ದಾರೆ.

ವಿದಾಯದ ಪಂದ್ಯ ಸಿಗದೆ ನಿವೃತ್ತಿಯಾದ 11 ದಿಗ್ಗಜ ಕ್ರಿಕೆಟಿಗರ ತಂಡವನ್ನು ಇರ್ಫಾನ್ ಪಠಾಣ್ ಪ್ರಕಟಿಸಿದ್ದಾರೆ. ಇದರಲ್ಲಿ ಸಚಿನ್ ತೆಂಡುಲ್ಕರ್‌ ಸ್ಥಾನ ಪಡೆದಿಲ್ಲ. ಕಾರಣ ಸಚಿನ್‌ ವಿದಾಯದ ಪಂದ್ಯ ಆಡಿ ನಿವೃತ್ತಿ ಹೇಳಿದ್ದಾರೆ. ಇನ್ನುಳಿದಂತೆ ಧೋನಿ, ವಿರೇಂದ್ರ ಸೆಹ್ವಾಗ್ ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷಣ್, ಯುವರಾಜ್ ಸಿಂಗ್, ಸುರೇಶ್ ರೈನಾ ಸೇರಿದಂತೆ ದಿಗ್ಗಜ ಕ್ರಿಕೆಟಿಗರು ಮಾಜಿ ಟೀಂ ಇಂಡಿಯಾ XI ತಂಡದಲ್ಲಿದ್ದಾರೆ.

ಇರ್ಫಾನ್ ಪಠಾಣ್ ಪ್ರಕಟಿಸಿದ ಮಾಜಿ ಟೀಂ ಇಂಡಿಯಾ XI
ಗೌತಮ್ ಗಂಭೀರ್
ವಿರೇಂದ್ರ ಸೆಹ್ವಾಗ್
ರಾಹುಲ್ ದ್ರಾವಿಡ್
ವಿವಿಎಸ್ ಲಕ್ಷ್ಮಣ್
ಯುವರಾಜ್ ಸಿಂಗ್
ಸುರೇಶ್ ರೈನಾ
ಎಂ.ಎಸ್.ಧೋನಿ
ಇರ್ಫಾನ್ ಪಠಾಣ್
ಅಜಿತ್ ಅಗರ್ಕರ್
ಜಹೀರ್ ಖಾನ್
ಪ್ರಗ್ಯಾನ್ ಓಜಾ

8/22/2020

ನಿವೃತ್ತಿಯಿಂದ ವಾಪಸ್ ಬನ್ನಿ: ಕ್ರಿಕೆಟಿಗ ಯುವರಾಜ್ ಸಿಂಗ್ ಗೆ ಮನವಿ

 ಮುಂಬೈ: 2011 ರ ವಿಶ್ವಕಪ್ ಗೆಲುವಿನ ಹೀರೋ ಯುವರಾಜ್ ಸಿಂಗ್ ಕ್ರಿಕೆಟ್ ಗೆ ನಿವೃತ್ತಿ ಹೇಳಿ ವರ್ಷವಾಗುತ್ತಿದೆ. ಈ ನಡುವೆ ಅವರ ತವರು ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ನಿವೃತ್ತಿ ನಿರ್ಧಾರದಿಂದ ಹಿಂದೆ ಬರುವಂತೆ ಒತ್ತಾಯಿಸಿದೆ.


ನಿವೃತ್ತಿಯಿಂದ ಹಿಂದೆ ಬಂದು ಮತ್ತೆ ತವರು ಪಂಜಾಬ್ ಪರ ಆಡುವಂತೆ ಕಾರ್ಯದರ್ಶಿ ಪುನೀತ್ ಬಾಲಿ ಮನವಿ ಮಾಡಿದ್ದಾರೆ. ಆದರೆ ಈ ಮನವಿಗೆ ಯುವಿ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪಂಜಾಬ್ ತಂಡಕ್ಕೆ ಈಗ ಅನುಭವಿ ಆಟಗಾರರ ಕೊರತೆಯಿದೆ. ಯುವರಾಜ್ ರಂತಹ ಆಟಗಾರರು ಕಣಕ್ಕೆ ಇಳಿದರೆ ಪಂಜಾಬ್ ತಂಡ ಬಲಗೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಅದೇ ಕಾರಣಕ್ಕೆ ಯುವಿಗೆ ನಿವೃತ್ತಿ ಬಿಟ್ಟು ವಾಪಸ್ ತಂಡಕ್ಕೆ ಬರುವಂತೆ ಮನವಿ ಮಾಡಿದ್ದಾರೆ.

ಸಂಜು ಪ್ರತಿಭೆಯನ್ನು ಧೋನಿಗೆ ಹೋಲಿಸಿದ ಶಶಿ ತರೂರ್: ಗಂಭೀರ್ ಬಳಿಕ ಶ್ರೀಶಾಂತ್ ಆಕ್ಷೇಪ

 ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಸತತ ಎರಡು ಇನ್ನಿಂಗ್ಸ್‌ಗಳಲ್ಲಿ ಶ್ರೇಷ್ಠ ಪ್ರದರ್ಶನವನ್ನು ನೀಡಿ ಮಿಂಚಿರುವ ಸಂಜು ಸ್ಯಾಮ್ಸನ್ ಪ್ರತಿಭೆಗೆ ಪ್ರಶಂಸೆಯ ಸುರಿಮಳೆಯೇ ಬಂದಿದ...